ವಾಷಿಂಗ್ಟನ್, ಫೆ.22: ಅಫ್ಘಾನಿಸ್ತಾನದಲ್ಲಿರುವ ಅಮೆರಿಕನ್ ವಾಯುನೆಲೆಯಲ್ಲಿ ಮುಸ್ಲಿಮರ ಪವಿತ್ರ ಗ್ರಂಥವಾದ ಕುರ್ಆನ್ನ ಬಗ್ಗೆ ಅನುಚಿತವಾಗಿ ನಡೆದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಿಯಾನ್ ಪನೆಟ್ಟ ಕ್ಷಮೆ ಯಾಚಿಸಿದ್ದಾರೆ.ಪ್ರಕರಣದ ಕುರಿತು ಶೀಘ್ರ ತನಿಖೆ ನಡೆಸುವುದಾಗಿಯೂ ಅವರು ಇದೇ ವೇಳೆ ಭರವಸೆ ನೀಡಿದ್ದಾರೆ. ಅಮೆರಿಕದ ವಿರುದ್ಧ ಘೋಷಣೆಗಳನ್ನು ಕೂಗಿದ ಅಫ್ಘಾನ್ನ ಪ್ರತಿಭಟನಕಾರರು ಬಗ್ರಂ ವಾಯುನೆಲೆಯನ್ನು ವಶಕ್ಕೆ ತೆಗೆದುಕೊಂಡ ಬಳಿಕ ಪನೆಟ್ಟರ ಈ ಹೇಳಿಕೆ ಹೊರಬಿದ್ದಿದೆ.ನ್ಯಾಟೊ ಪಡೆಗಳು ಮುಸ್ಲಿಮರ ಪವಿತ್ರ ಗ್ರಂಥ ಕುರ್ಆನ್ನ ಪ್ರತಿಗಳು ಸುಟ್ಟು ಹಾಕಿರುವ ವರದಿಗಳು ಬರುತ್ತಿದ್ದಂತೆಯೇ ಸ್ಥಳೀಯ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಮೆರಿಕದ ವಿರುದ್ಧ ಪ್ರತಿಭಟನೆ ನಡೆಸಿದ್ದರು.
‘‘ಕುರ್ ಆನ್ ಸೇರಿದಂತೆ ಧಾರ್ಮಿಕ ವಸ್ತುಗಳ ಬಗ್ಗೆ ಅನುಚಿತ ವರ್ತನೆ ತೋರಿರುವ ಬಗ್ಗೆ ತೀವ್ರ ಖೇದ ವ್ಯಕ್ತಪಡಿಸಿರುವ ಅಫ್ಘಾನಿಸ್ತಾನದಲ್ಲಿರುವ ನ್ಯಾಟೊ ನೇತೃತ್ವದ ಪಡೆಯ ಅಮೆರಿಕನ್ ಕಮಾಂಡರ್ ಜನರಲ್ ಜಾನ್ ಅಲೆನ್ ಈ ಬಗ್ಗೆ ಸೂಕ್ತ ಗಮನ ಹರಿಸಿದ್ದಾರೆ ಎಂದೂ ರಕ್ಷಣಾ ಸಚಿವ ತಿಳಿಸಿದ್ದಾರೆ.‘‘ಜಾನ್ ಅಲೆನ್ ಹಾಗೂ ನಾನು ಅಫ್ಘಾನ್ನ ಜನತೆಯಲ್ಲಿ ಕ್ಷಮೆಯಾಚಿಸುತ್ತೇವೆ ಮತ್ತು ಇಂತಹ ಅಕ್ಷಮ್ಯ ವರ್ತನೆಯನ್ನು ಕಠಿಣ ಪದಗಳಿಂದ ಖಂಡಿಸುತ್ತೇವೆ’’ ಎಂದವರು ಹೇಳಿದ್ದಾರೆ.
ಯುರೋಪಿನಲ್ಲಿ ಈಗ ಬದಲಾವಣೆಯ ಗಾಳಿ ಬೀಸತೊಡಗಿದೆ. ಜಗತ್ತಿನ ಬಂಡವಾಳಶಾಹಿ ವ್ಯವಸ್ಥೆಯ ಆರ್ಥಿಕ ಬಿಕ್ಕಟ್ಟು ಆ ಭೂಭಾಗದ ನಾಲ್ಕು ಪ್ರದೇಶಗಳಲ್ಲಿ ನಡೆದ ಚುನಾವಣೆಯ ...
Click here to post your views ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...
ಅಧಿಕಾರ ರಾಜಕಾರಣ ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದೆ. ರಾಜಸ್ಥಾನ, ಉತ್ತರಖಂಡ, ಕರ್ನಾಟಕ ಹ ...